Wednesday, January 29, 2014

ಎನ್.ಎನ್.ಎಸ್ ಶಿಬಿರದಿಂದ ಸಾಂಘಿಕ ಮನೋಭಾವ ಬೆಳವಣಿಗೆ : ಜಿ.ಪಂ.ಸದಸ್ಯೆ ಜ್ಯೋತಿ ಚಂದ್ರಮೌಳಿ


ಆಲಗೇರಮಂಡ್ರಿಯಲ್ಲಿ ಕೊಡಚಾದ್ರಿ ಕಾಲೇಜಿನ ಎನ್ಎಸ್ಎಸ್ ಶಿಬಿರ
ಹೊಸನಗರ : ಎನ್.ಎಸ್.ಎಸ್ ಶಿಬಿರದಲ್ಲಿ ವಿದ್ಯಾಥಿ೯ಗಳು ಪಾಲ್ಗೊಳ್ಳುವ ಮೂಲಕ ಅವರಲ್ಲಿ ಸಾಂಘಿಕ ಮನೋಭಾವ ಬೆಳೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಜ್ಯೋತಿ ಚಂದ್ರಮೌಳಿ ಅಭಿಪ್ರಾಯಪಟ್ಟರು.
ಎನ್ಎಸ್ಎಸ್ ಶಿಬಿರವನ್ನು ಜಿಪಂ ಸದಸ್ಯೆ ಜ್ಯೋತಿ ಚಂದ್ರಮೌಳಿ ಉದ್ಘಾಟಿಸಿದರು.
ತಾಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಲಗೇರಿಮಂಡ್ರಿ ಸಕಾ೯ರಿ ಶಾಲೆಯ ಆವರಣದಲ್ಲಿ ಕೊಡಚಾದ್ರಿ ಸಕಾ೯ರಿ ಪ್ರಥಮ ದಜೆ೯ ಕಾಲೇಜಿನ ವತಿಯಿಂದ ಹಮ್ಮಿಕೊಂಡ 7 ದಿನಗಳ ಎನ್.ಎಸ್.ಎಸ್ ವಾಷರ್ಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾಥಿ೯ಗಳು ಸೇವಾಮನೋಭಾವವನ್ನು ಬೆಳೆಸಿಕೊಂಡು ತಮ್ಮ ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಿವೆ. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅಧ್ಯಯನ ಮಾಡಿ ಅವುಗಳಿಗೆ ಪರಿಹಾರೋಪಾಯವನ್ನು ವಿದ್ಯಾಥಿ೯ಗಳು ಕಂಡು ಹಿಡಿಯಬೇಕಾಗಿದೆ ಎಂದರು.
ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರುಣಾಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾಥಿ೯ಗಳು ಕ್ರಿಯಾಶೀಲರಾಗಿ ಶಿಬಿರದಲ್ಲಿ ಪಾಲ್ಗೊಂಡು ಇಲ್ಲಿ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕೆಂದರು.
ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಿರ್ಮಲಾ ಗಣೇಶ್, ಹರಿದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಬಿ.ವಾಸು, ಅಲಗೇರಿಮಂಡ್ರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜಪ್ಪ, ಶಾಲೆಯ ಮುಖ್ಯ ಶಿಕ್ಷಕ ಹರೀಶ ಭಟ್ ಶಿಬಿರಾಧಿಕಾರಿ ಕೆ.ಸಿ.ಸೌಮ್ಯ, . ಸಹ ಶಿಬಿರಾಧಿಕಾರಿ ಅರುಣ್, ಪ್ರಶಾಂತ್, ಸುಧಾಕರ್ ಮುಂತಾದವರು ಇದ್ದರು. ವಿದ್ಯಾಥಿ೯ಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.


No comments:

Post a Comment