Wednesday, October 3, 2018

ಗಾಂಧಿ ಚಿಂತನೆ ಅಳವಡಿಸಿಕೊಳ್ಳುವುದು ಮುಖ್ಯ: ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಎನ್.ಆದಿರಾಜ್ : ನೂಲಿಗ್ಗೇರಿ ಸರ್ಕಾರಿ ಶಾಲೆಯಲ್ಲಿ ಶ್ರಮದಾನದ ಮೂಲಕ ಗಾಂಧಿ ಜಯಂತಿ ಆಚರಣೆ


ಹಾತ್ಮಗಾಂಧೀಜಿಯ ಆದರ್ಶಗಳನ್ನು ಕೇವಲ ತಿಳಿದುಕೊಂಡರೆ ಸಾಲದು.. ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ನೂಲಿಗ್ಗೇರಿ ಸರ್ಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಎನ್.ಆದಿರಾಜ ಹೇಳಿದರು.
ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಗಾಂಧಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗಾಂಧೀಜಿ ಬಗ್ಗೆ ತಾವು ಅರಿತುಕೊಂಡ ವಿಚಾರಗಳನ್ನು ಸಭೆಯಲ್ಲಿ ಹಂಚಿಕೊಂಡರು.
ಶ್ರಮದಾನ:
ಕಾರ್ಯಕ್ರಮಕ್ಕು ಮುನ್ನ, ಎ.ಎನ್.ಆದಿರಾಜ ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಜೊತೆಗೂಡಿ ಶಾಲಾ ಆವರಣವನ್ನು ಸ್ವಚ್ಚಗೊಳಿಸಿದರು.
ಕಾರ್ಯಕ್ರಮದಲ್ಲಿ  ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣಮ್ಮ, ಸದಸ್ಯರಾದ ಶಾಂತಾ, ವೆಂಕಟೇಶ್, ದೀಪಾ, ಶಿಕ್ಷಕರಾದ ರೇಖಾ, ಫರೀದಾ, ಕಾವ್ಯಶ್ರೀ, ಸುಶ್ಮಿತಾ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ಗಣೇಶ್ ಸ್ವಾಗತಿಸಿದರು. ತ್ರಿಷಾ ವಂದಿಸಿದರು. ಸ್ಪೂರ್ತಿ ಕಾರ್ಯಕ್ರಮ ನಿರ್ವಹಿಸಿದರು.

No comments:

Post a Comment